ಪ್ರಜಾಸ್ತ್ರ ಸುದ್ದಿ
ರಾಯಚೂರು: ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಲಿಂಗಸಗೂರು ತಾಲೂಕಿನ ತಿಂಥಣಿ ಸೇತುವೆ ಹತ್ತಿರ ನಡೆದಿದೆ. ಅದೃಷ್ಟವಶಾತ್ ಬಸ್ ಚಾಲಕನ ಸಮಯಪ್ರಜ್ಞೆಯಿಂದ 50 ಪ್ರಯಾಣಿಕರ ಜೀವ ಉಳಿದಿದೆ.
ಲಾರಿ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಅಪಘಾತದಿಂದಾಗಿ ಜೇವರ್ಗಿ-ಚಾಮರಾಜನಗರ ಹೆದ್ದಾರಿ ಬಂದ್ ಆಗಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.