ಬೆಂಗಳೂರು: ಹಂತ ಹಂತವಾಗಿ ಲಾಕ್ ಡೌನ್ ಸಡಲಿಕೆಯಾಗ್ತಿದೆ. ಅದರ ಮುಂದುವರೆದ ಭಾಗವಾಗಿ ನಾಳೆಯಿಂದ ಕೆಎಸ್ಆರ್ ಟಿಸಿ ಬಸ್ ಸಂಚಾರ ಶುರುವಾಗಲಿದೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ನಾಡಿನಲ್ಲಿರುವ ಕಂಟೇನ್ಮೆಂಟ್ ಪ್ರದೇಶ, ತಾಲೂಕುಗಳನ್ನ ಹೊರತು ಪಡಿಸಿ ಉಳಿದ ಕಡೆ ಬಸ್ ಸಂಚಾರಕ್ಕೆ ಸಿಎಂ ಅನುಮತಿ ನೀಡಿದ್ದಾರೆ. ಕರೋನಾ ವೈರಸ್ ಇರುವ ತಾಲೂಕುಗಳಲ್ಲಿ ಮುಂದಿನ ಆದೇಶದವರೆಗೂ ಬಸ್ ಸಂಚಾರ ಇರುವುದಿಲ್ಲ ಎಂದು ಹೇಳಿದ್ದಾರೆ.