ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ: ಕೆಎಸ್ಆರ್ ಟಿಸಿ ಬಸ್ ಚಾಲಕ ನಬಿ ರಸೂಲ್ ಮೇಲೆ ಕಲ್ಲು ತೂರಾಟ ನಡೆಸಿ ಹತ್ಯೆಗೆ ಕಾರಣವಾಗುವ ಮೂಲಕ, ಸಾರಿಗೆ ನೌಕರರ ಮುಷ್ಕರ ಹಿಂಸಾಚಾರಕ್ಕೆ ತಿರುಗಿದೆ. ಈ ಸಂಬಂಧ ಸಾರಿಗೆ ನೌಕರರ ಸಂಘಟನೆಯ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ದೂರು ದಾಖಲಾಗಿದೆ.
ರೈತ ಸಂಘದ ಅಧ್ಯಕ್ಷ ಕೆ.ಎಂ ಮಾದಪ್ಪ ಚಾಮರಾಜನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರಕ್ಕೆ ಕೋಡಿಹಳ್ಳಿ ಪ್ರಚೋದನೆ ನೀಡಿದ್ದೆ ಇಷ್ಟಕ್ಕೆಲ್ಲ ಕಾರಣವೆಂದು ಹೇಳಿ ದೂರು ದಾಖಲಿಸಲಾಗಿದೆ.