ಹೊತ್ತಿ ಉರಿಯಿತು ಚಲಿಸ್ತಿದ್ದ ಬಸ್

343

ಚಿತ್ರದುರ್ಗ: ಕೆಎಸ್ಆರ್ ಟಿಸಿ ಸ್ಲೀಪರ್ ಕೋಚ್ ಬಸ್ ವೊಂದು ಹೊತ್ತಿ ಉರಿದ ಘಟನೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಿರಿಯೂರು ತಾಲೂಕಿನ ಗಿಡ್ಡೋಬನಹಳ್ಳಿಯ ಹತ್ತಿರ ಏಕಾಏಕಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪಾರಾಗಿದ್ದಾರೆ.

ಬೆಳಗಾವಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ನಲ್ಲಿ, ಇಂದು ಬೆಳ್ಳಗೆ ಐಮಂಗಳ ಗೇಟ್ ಬಳಿ ಹೊಗೆ ಕಾಣಿಸಿಕೊಂಡಿದೆ. ಇದು ಡ್ರೈವರ್ ಗಮನಕ್ಕೆ ಬಂದಿಲ್ಲ. ಹೀಗಾಗಿ ಬಸ್ ಚಲಾಯಿಸ್ತಿದ್ದಾನೆ. ಇದನ್ನ ನೋಡಿದ ಬೇರೆ ವಾಹನಗಳ ಚಾಲಕರು ತಿಳಿಸಿದ್ದಾರೆ. ತಕ್ಷಣ ಬಸ್ ನಿಲ್ಲಿಸಿದ ಚಾಲಕ ಪ್ರಯಾಣಿಕರನ್ನೆಲ್ಲ ಕೆಳಗೆ ಇಳಿಸಿದ್ದಾನೆ. ಹೀಗಾಗಿ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಬಸ್ ನಲ್ಲಿ ಒಟ್ಟು 30 ಜನ ಪ್ರಯಾಣಿಕರಿದ್ರು ಅಂತಾ ತಿಳಿದು ಬಂದಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿತು. ಬಸ್ ಬೆಳಗಾವಿ ಕೆಎಸ್ಆರ್ ಟಿಸಿ ವಿಭಾಗಕ್ಕೆ ಸೇರಿದೆ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!