ಪ್ರಜಾಸ್ತ್ರ ಸುದ್ದಿ
ಕೋಲಾರ: 6ನೇ ವೇತನ ಆಯೋಗ ಜಾರಿ ಸಂಬಂಧ ಕಳೆದ ಮೂರು ದಿನಗಳಿಂದ ಬಸ್ ಬಂದ್ ಮಾಡಿ ಮುಷ್ಕರ ನಡೆಸ್ತಿರುವ ಸಾರಿಗೆ ಸಿಬ್ಬಂದಿ ನಡುವೆ, ಬಸ್ ಓಡಿಸಿದ್ದಕ್ಕೆ ಚಾಲಕರೊಬ್ಬರ ಶ್ರದ್ಧಾಂಜಲಿ ಫೋಟೋ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಬಸ್ ಚಾಲಕ ಸತ್ಯಪ್ಪ ಮೃತಪಟ್ಟಿದ್ದಾರೆ ಎಂದು ಪೋಸ್ಟರ್ ಮಾಡಿ ಶೇರ್ ಮಾಡಿದ್ದಾರೆ. ಅಲ್ದೇ, ಇವರ ಮೇಲೆ ಪೆಟ್ರೋಲ್ ಸುರಿದು ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸಾರಿಗೆ ನೌಕರ ಶ್ರೀನಿವಾಸ ಎಂಬಾತನನ್ನ ಅಮಾನತು ಮಾಡಲಾಗಿದೆ.