ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕೆಎಸ್ಆರ್ ಟಿಸಿ ಬಸ್ ನಿರ್ವಾಹಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ನಡೆದಿದೆ. ಶಿವಕುಮಾರ ನೀಲಾಗರ(40) ಎಂಬಾತ ಶುಕ್ರವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ ಅಧಿಕಾರಿಗಳ ಕಿರುಕುಳ ಕಾರಣ ಎನ್ನಲಾಗ್ತಿದೆ.
ಸಾರಿಗೆ ನೌಕರರು ಮುಷ್ಕರ ನಡೆಸ್ತಿದ್ದು, ಅಧಿಕಾರಿಗಳು ಕರ್ತವ್ಯಕ್ಕೆ ಬರಬೇಕೆಂದು ಕಿರಕುಳ ಕೊಡ್ತಿದ್ದಾರೆ. ಇದ್ರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿವೆ. ಧಾರವಾಡ ವಿಭಾಗದ ಸವದತ್ತಿ ಘಟಕದಲ್ಲಿ ಕಳೆದ 12 ವರ್ಷಗಳಿಂದ ಕೆಲಸ ಮಾಡ್ತಿದ್ದರು.
ಸಾರಿಗೆ ನೌಕರರನ ಆತ್ಮಹತ್ಯೆ ಸಂಬಂಧ ಮಾತ್ನಾಡಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಾಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಂಸ್ಥೆಗೆ ಕೆಟ್ಟ ಹೆಸರು ತರಬೇಕು ಅನ್ನೋ ಕಾರಣಕ್ಕೆ ಮುಷ್ಕರ ನಿರತರು ಈ ರೀತಿ ಹೇಳ್ತಿದ್ದಾರೆ. ಸಂಬಳ ಹೆಚ್ಚಾದರೆ ಸಾಕು ಎಂದು ಸಿಬ್ಬಂದಿ ಹೇಳುತ್ತಿದ್ದು, ಇಂದಿನಿಂದ 1 ಸಾವಿರ ಬಸ್ ಸಂಚರಿಸುತ್ತವೆ ಎಂದರು.