ಕೆಎಸ್ಆರ್ ಟಿಸಿ ನೌಕರ ಆತ್ಮಹತ್ಯೆ

304

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಡೋಣಿ ಬೂದಿಹಾಳ ಗ್ರಾಮದಲ್ಲಿ ಕಲಬುರಗಿ ಬಸ್ ಡಿಪೋದಲ್ಲಿ ಕೆಲಸ ಮಾಡುತ್ತಿದ್ದ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸಿದ್ದನಗೌಡ ಕಲ್ಲಪ್ಪಗೌಡ ಬಿರಾದಾರ(48) ಅನ್ನೋ ಸೋಮವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮದ ಸರ್ಕಾರಿಯ ಮುಂಭಾಗದಲ್ಲಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರಂತೆ. ಮೃತನಿಗೆ ಪತ್ನಿ, ಇಬ್ಬರು ಹೆಣ್ಮಕ್ಕಳು ಹಾಗೂ ಒಬ್ಬ ಮಗನಿದ್ದಾನೆ. ದೇವರಹಿಪ್ಪರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!