ಮುಷ್ಕರ ಹಿಂಸಾತ್ಮಕ್ಕೆ ಬೆಳೆಯಲು ಸರ್ಕಾರ ಕಾರಣ

214

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಹಿಂಸಾತ್ಮಕ್ಕೆ ತಿರುಗಿದೆ. ಇದಕ್ಕೆ ಶುಕ್ರವಾರ ಜೀವವೊಂದು ಬಲಿಯಾಗಿದೆ. ಸಾರಿಗೆ ನೌಕರ ನಬಿ ರಸೂಲ್ ಅನ್ನೋರಿಗೆ ಕಲ್ಲೇಟು ಬಿದ್ದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇದಕ್ಕೆಲ್ಲ ಸರ್ಕಾರ ಕಾರಣ ಎಂದಿದ್ದಾರೆ.

ನಬಿ ರಸೂಲ್ ಸಾವು ನನ್ನನ್ನು ದಿಗ್ಬ್ರಾಂತನನ್ನಾಗಿಸಿದೆ. ಪ್ರತಿಭಟನೆ ಎತ್ತ ಸಾಗುತ್ತಿದೆ? ಸರ್ಕಾರ ಏನು ಮಾಡುತ್ತಿದೆ? ಎಂಬ ಪ್ರಶ್ನೆಗಳು ನನ್ನನ್ನು ತೀವ್ರವಾಗಿ ಕಾಡುತ್ತಿವೆ. ಮುಷ್ಕರವನ್ನು ಹಿಂಸಾತ್ಮಕ ಹಂತಕ್ಕೆ ಬೆಳೆಯಲು ಬಿಟ್ಟ ಸರ್ಕಾರದ ನಡೆಯಲ್ಲಿ ಬೇಜವಾಬ್ದಾರಿತನ ಸ್ಪಷ್ಟವಾಗಿ ಕಾಣಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!