ಕುಮಾರಸ್ವಾಮಿ ವಿರುದ್ಧ ಹೆಚ್ಚಾಯ್ತು ಪಕ್ಷ ವಿಸರ್ಜನೆ ಮಾತು

236

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಒಂದ್ಕಡೆ ಕಾಂಗ್ರೆಸ್ ನೀಡಿದ ಗ್ಯಾರೆಂಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಇನ್ನೊಂದ್ಕಡೆ ಮಾಜಿ ಸಿಎಂ ಕುಮಾರಸ್ವಾಮಿ ಪಕ್ಷ ವಿಸರ್ಜನೆ ಮಾತು ಕೇಳಿ ಬರುತ್ತಿದೆ.

ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದಿದ್ದ ಹೆಚ್ಡಿಕೆಗೆ ಪಕ್ಷ ವಿಸರ್ಜನೆ ಯಾವಾಗ ಎಂದು ಕಾಂಗ್ರೆಸ್ ಕೇಳಿದೆ. ಇದರ ಜೊತೆಗೆ ಸಾರ್ವಜನಿಕರು ಸಹ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳಿ. ಪಕ್ಷ ವಿಸರ್ಜನೆ ಯಾವಾಗ ಎಂದು ಪ್ರಶ್ನಿಸುತ್ತಿದ್ದಾರೆ.

ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬರದೆ ಹೋದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಹಿಂದೆ 2018ರಲ್ಲಿ ಸಹ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು ಹೇಳಿ ಮೈತ್ರಿ ಸರ್ಕಾರದ ಭಾಗವಾಗಿದ್ದರು. 2023ರಲ್ಲೂ ಅವರ ಪಕ್ಷಕ್ಕೆ ಜನರು ಆಶೀರ್ವಾದ ಮಾಡಿಲ್ಲ. ಹೀಗಾಗಿ ಈಗ್ಲಾದರೂ ನೀವು ಕೊಟ್ಟು ಮಾತು ಉಳಿಸಿಕೊಳ್ಳಿ ಎಂದು ಜನರು ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!