ಕುರುಬರ ಮೀಸಲಾತಿ ಹೋರಾಟ: ಸಿದ್ದು-ಈಶ್ವರಪ್ಪ ಜಟಾಪಟಿ

240

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ/ಶಿವಮೊಗ್ಗ: ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ನೀಡಬೇಕೆಂದು ರಾಜ್ಯದಲ್ಲಿ ಹೋರಾಟ ನಡೆಯುತ್ತಿದೆ. ಇದಕ್ಕೆ ಸಚಿವ ಕೆ.ಎಸ್ ಈಶ್ವರಪ್ಪ ಸೇರಿದಂತೆ ರಾಜ್ಯ ಸರ್ಕಾರದಲ್ಲಿರುವ ಮುಖಂಡರು ಬೆಂಬಲ ನೀಡಿದ್ದಾರೆ. ಸಮಾವೇಶದಲ್ಲಿಯೂ ಭಾಗವಹಿಸಿದ್ದಾರೆ. ಇದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಈಶ್ವರಪ್ಪ ನಡುವೆ ಜಟಾಪಟಿ ಏರ್ಪಡಿಸಿದೆ.

ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್ ಎಸ್ಎಸ್ ಹಾಗೂ ಬಿಜೆಪಿ ಕೈವಾಡವಿದೆ. ಈಶ್ವರಪ್ಪ ಯಾರ ವಿರುದ್ಧ ಹೋರಾಟ ಮಾಡ್ತಿದ್ದಾರೆ ಎಂದು ಸಿದ್ದರಾಮಯ್ಯ ಕೇಳಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಕುಲಶಾಸ್ತ್ರ ಅಧ್ಯಯನಕ್ಕೆ ಆದೇಶಿಸಿದ್ದೇನೆ. ಅದು ನಡೆಯುತ್ತಿದೆ. ಅದರ ವರದಿ ಬಂದ್ಮೇಲೆ ಸರ್ಕಾರದ ಮೇಲೆ ಒತ್ತಡ ಹಾಕುತ್ತೇನೆ. ಅದು ಬಿಟ್ಟು ಈಗ್ಲೇ ರ್ಯಾಲಿ, ಸಮಾವೇಶದ ಅಗತ್ಯವೇನೆಂದು ಕೇಳಿದ್ದಾರೆ.

ಕುರುಬರ ಎಸ್ಟಿ ಹೋರಾಟ ಸಮಾವೇಶದಿಂದ ಸಿದ್ದರಾಮಯ್ಯಗೆ ಕಿರಿಕಿರಿಯಾಗಿದೆ. ಸಮಾವೇಶದಲ್ಲಿ ಅಪಾರ ಪ್ರಮಾಣದಲ್ಲಿ ಜನ ಸೇರಿರುವುದು ಸಿದ್ದರಾಮಯ್ಯಗೆ ನೋವಾಗಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಕಿಡಿ ಕಾರಿದ್ದಾರೆ. ಹೀಗಾಗಿ ಬೇರೆ ಬೇರೆ ಪಕ್ಷಗಳಲ್ಲಿರುವ ಒಂದೇ ಸಮುದಾಯದ ನಾಯಕರ ನಡುವೆ ವಾಗ್ದಾಳಿ ಮುಂದುವರೆದಿದೆ.




Leave a Reply

Your email address will not be published. Required fields are marked *

error: Content is protected !!