ಪ್ರಜಾಸ್ತ್ರ ಸುದ್ದಿ
ನವದೆಹಲಿ: ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ನಟಿ ಖುಷ್ಬೂ, ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ನೊಂದಿಗೆ ಇದ್ದ ಸಂಬಂಧವನ್ನ ಕಡಿದುಕೊಂಡಿದ್ದಾರೆ. ಈ ವೇಳೆ ಮಾತ್ನಾಡಿದ ಅವರು, ಪಕ್ಷದ ಉನ್ನತ ಮಟ್ಟದಲ್ಲಿರುವ ಕೆಲವರು ಪ್ರಾಮಾಣಿಕರನ್ನ ನಿಯಂತ್ರಿಸುವ ಕೆಲಸ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.
2014ರಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಅಲ್ಲಿಂದ ಇಲ್ಲಿಯ ತನಕ ಯಾವುದೇ ಮಾನ್ಯತೆ, ಲಾಭ, ಖ್ಯಾತಿಯಿಲ್ಲದೆ ಪಕ್ಷಕ್ಕಾಗಿ ದುಡಿದಿದ್ದೇನೆ. ಆದ್ರೆ, ಪಕ್ಷದ ಸಂಪರ್ಕದಲ್ಲಿ ಇಲ್ಲದವರು, ಸಾರ್ವಜನಿಕವಾಗಿ ಕಾಣಿಸಿಕೊಳ್ಳದವರು ಪ್ರಾಮಾಣಿಕರನ್ನ ಕಂಟ್ರೋಲ್ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಎಐಸಿಸಿ ಹಂಗಾಮಿ ಅಧ್ಯಕ್ಷ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ. ಇದರೊಂದಿಗೆ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಸ್ಥಾನದಿಂದ ಕೂಡಲೇ ಜಾರಿಗೆ ಬರುವಂತೆ ತೆಗೆದು ಹಾಕಲಾಗಿದೆ.