ಪ್ರಜಾಸ್ತ್ರ ಸುದ್ದಿ
ಧಾರವಾಡ: ಜಿಲ್ಲೆಯ ಅಳ್ನಾವರ ಪಟ್ಟದ ಹತ್ತಿರ ಗುರವಾರ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಲಾರಿ ಅಳ್ನಾವರ ಧಾರವಾಡ ಗೋವಾ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆಯಿಂದಾಗಿ ಅಕ್ಕ,ಪಕ್ಕ ಹಳ್ಳಿಗಳಿಗೆ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆಯಾಗಿದೆ. ಸ್ಥಳಕ್ಕೆ ಲೈನ್ ಮನ್ ಗಳು ಹಾಜರಿದ್ದು, ದುರಸ್ಥಿ ಕೆಲಸ ನಡೆಸಿದ್ದಾರೆ.