ಇಂಡಿಯಲ್ಲಿ ತೇರಿನ ಗಾಲಿಗೆ ಸಿಕ್ಕು ಇಬ್ಬರ ಸಾವು

111

ಪ್ರಜಾಸ್ತ್ರ ಸುದ್ದಿ

ವಿಜಯಪುರ: ತೇರಿನ ಗಾಲಿಗೆ ಸಿಲುಕಿ ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ಜಾತ್ರೆಯಲ್ಲಿ ನಡೆದಿದೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಸಂಜೆ ರಥೋತ್ಸವ ನಡೆದಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ತೇರು ಎಳೆಯುವಾಗ ನೂಕುನುಗ್ಗಲಾಗಿ ಚಕ್ರಕ್ಕೆ ಸಿಲುಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೋಭು ಸಿಂಧೆ ಎಂದು ಒಬ್ಬರ ಗುರುತು ಪತ್ತೆಯಾಗಿದೆ. ಇನ್ನೊಬ್ಬರ ಬಗ್ಗೆ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!