ಜಾರ್ಖಂಡ್: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಸಿಎಂ, ಆರ್ ಜಿಡಿ ಮುಖ್ಯಸ್ಥ ಲಾಲು ಪ್ರಸಾದ ಯಾದವ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕರಿಸಲಾಗಿದೆ. ಜಾರ್ಖಂಡ್ ಹೈ ಕೋರ್ಟ್ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.
ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಲಾಲುಗೆ ಜೈಲೇ ಗತಿ. ಭಾರತೀಯ ದಂಡ ಸಂಹಿತೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ 7 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗಿದೆ. ಆದ್ರೆ, ಅನಾರೋಗ್ಯದ ಕಾರಣದಿಂದ ತಮಗೆ ಜಾಮೀನು ನೀಡಬೇಕೆಂದು ಅರ್ಜಿ ಸಲ್ಲಿಸಿದ್ರು. ಅಲ್ದೇ, ತಮ್ಮ ಕಕ್ಷಿದಾರರಿಗೆ ವಿಧಿಸಿರುವ ಜೈಲು ಶಿಕ್ಷೆಯಲ್ಲಿ ಬಹುತೇಕ ಅನುಭವಿಸಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಕೆಂದು ವಕೀಲರು ಕೇಳಿಕೊಂಡಿದ್ರು. ಆದ್ರೆ, ಕೋರ್ಟ್ ಅರ್ಜಿ ವಜಾಗೊಳಿಸಲಾಗಿದೆ.