ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದನ್ನ ರಾಜ್ಯ ಸರ್ಕಾರ ಕೈ ಬಿಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಅವರು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.
ತಿದ್ದುಪಡಿ ಹೆಸರಲ್ಲಿ ಕಾಯ್ದೆಯ ಆತ್ಮವನ್ನೇ ಕೊಲ್ಲಲು ಹೊರಟಿದ್ದಾರೆ. ಭೂ ಸುಧಾರಣಾ ಕಾಯ್ದೆ, ಎಪಿಎಸಿ ಕಾಯ್ದೆ ತಿದ್ದುಪಡಿಯನ್ನ ಕೈ ಬಿಡಬೇಕು. ಇಲ್ಲವಾದ್ರೆ ಜನರು ಬೀದಿಗೆ ಇಳಿಯುತ್ತಾರೆ ಎಂದು ಎಚ್ಚರಿಸಿದ್ದಾರೆ. ಇನ್ನು ರಾಜ್ಯ ಸರ್ಕಾರದ ಸಚಿವರು ತಿದ್ದುಪಡಿ ಕುರಿತು ಸಮರ್ಥಿಸಿಕೊಳ್ತಿದ್ದಾರೆ.