ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಮನಗರದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವುದು 25 ಕೋಟಿ ರೂಪಾಯಿ ಮೌಲ್ಯದ ಸರ್ಕಾರಿ ಗೋಮಾಳ ಕಬಳಿಕೆ ಪ್ರಕರಣ. ಇದೀಗ ಇದು ಸಿಎಂ ಕಚೇರಿ ತಲುಪಿದಿದೆ. ಮಾಜಿ ಸಚಿವ, ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರ ಸಲ್ಲಿಸಿದ್ದಾರೆ.
ಬಹುಕೋಟಿ ಹಗರಣದ ತನಿಖೆಯನ್ನು ಸಿಓಡಿ ಮೂಲಕ ನಡೆಸಬೇಕು ಎಂದು ಪತ್ರ ಸಲ್ಲಿಸಿದ್ದಾರೆ. ಇದರಲ್ಲಿ ಯಾವೆಲ್ಲ ಪ್ರಭಾವಿಗಳು ಶಾಮೀಲಾಗಿದ್ದಾರೆ ಅನ್ನೋದು ತನಿಖೆಯಿಂದ ಹೊರ ಬರುತ್ತಾ, ಕಸದ ಬುಟ್ಟಿಗೆ ಹೋಗುತ್ತಾ ಅನ್ನೋದು ಮುಂದೆ ತಿಳಿಯಲಿದೆ.