ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ನಗರದಲ್ಲಿ ತಡರಾತ್ರಿ ಚಾಕುವಿನಿಂದ ಇರಿದು ಯುವಕನೊಬ್ಬನನ್ನು ಕೊಲೆ ಮಾಡಲಾಗಿದೆ. ಬಾಲಾಜಿ ಲೇಔಟ್ ನಲ್ಲಿ ಹತ್ಯೆ ನಡೆದಿದ್ದು, ಸಲ್ಮಾನ್ ಕೊಲೆಯಾದ ಯುವಕ.
ತಂದೆಯ ಫರ್ನಿಚರ್ ಅಂಗಡಿ ಹಾಗೂ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್ ಕಳೆದ ರಾತ್ರಿ ಸುಮಾರು 11 ಗಂಟೆಗೆ ಮನೆಗೆ ಹೋಗುತ್ತಿದ್ದ, ಈ ವೇಳೆ ದಾಳಿ ಮಾಡಿದ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.