ಪ್ರಜಾಸ್ತ್ರ ಸುದ್ದಿ
ಮಂಗಳೂರು: ಅಕ್ರಮ ಟೋಲ್ ಗೇಟ್ ವಿರೋಧಿ ಹೋರಾಟಗಾರರ ವಿರುದ್ಧ ಮಧ್ಯರಾತ್ರಿ ಅವರ ಮನೆಗೆ ಹೋಗಿ ನೋಟಿಸ್ ನೀಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ, ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಆಗ್ರಹಿಸಿದ್ದಾರೆ.
ಅದರಲ್ಲೂ ಮಹಿಳಾ ಹೋರಾಟಗಾರರ ಮನೆಗೆ ತಡರಾತ್ರಿ ತೆರಳಿ ನೋಟಿಸ್ ನೀಡಲಾಗಿದೆ. ಇದು ಸುಪ್ರೀಂ ಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ. ಮಹಿಳಾ ಆಯೋಗ ಹಾಗೂ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಹೋರಾಟ ಮಾಡಲಾಗಿದೆ ಎಂದು ಮಾಧ್ಯಮಗೋಷ್ಠಿಯಲ್ಲಿ ಡಿಸೋಜಾ ಹೇಳಿದರು.
ಯಾವುದೇ ರೀತಿಯಿಂದ ವಿರೋಧ ವ್ಯಕ್ತಪಡಿಸಿದರೂ ನಾಳೆ ನಡೆಯುವ ಪ್ರತಿಭಟನೆ ನಡೆಯಲಿದೆ. ಇದಕ್ಕಾಗಿ ಜೈಲಿಗೆ ಹೋಗಲು ಸಿದ್ಧ. ಸಾರ್ವಜನಿಕ ಹಿತಾಸಕ್ತಿಯನ್ನು ಆಡಳಿತ ನಡೆಸುವವರು ಬಯಸುವುದಾದರೆ ನಾಳೆ ಬಂದು ಟೋಲ್ ಗೇಟ್ ಬಂದ್ ಮಾಡಿಸಬೇಕು ಅಂತಾ ಸಂಸದರು ಹಾಗೂ ಶಾಸಕರಿಗೆ ಸವಾಲ್ ಹಾಕಿದರು.