ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿರುವ ವಕೀಲ ಜಗದೀಶರನ್ನು ಕೊಡಿಗೇಹಳ್ಳಿಯಲ್ಲಿರುವ ಅವರ ಮನೆಯಲ್ಲಿ ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಬಂಧಿಸಲಾಗಿದೆ.
ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆಯಲ್ಲಿ ವಕೀಲ ಜಗದೀಶ್ ಅವರ ಮಗನ ಮೇಲೆ ಹಲ್ಲೆ ಮಾಡಲಾಗಿದೆ. ಈ ಸಂಬಂಧ ದೂರು ನೀಡಿದ್ದಾರೆ. ಇವರ ವಿರುದ್ಧ ಇತರೆ ವಕೀಲರು ಸಹ ದೂರು ನೀಡಿದ್ದಾರೆ. ಭಾನುವಾರ ವಕೀಲ ಜಗದೀಶ್ ಕೆ.ಎನ್ ಮಹಾದೇವ ಅವರನ್ನು ಬಂಧಿಸಲಾಗಿದೆ.