ಪ್ರಜಾಸ್ತ್ರ ಸುದ್ದಿ
ಮೈಸೂರು: ರಾಜ್ಯದಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿರುವ ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಸಂಸದ ಶ್ರೀನಿವಾಸ ಪ್ರಸಾದ ಪ್ರತಿಕ್ರಿಯೆ ನೀಡಿದ್ದು, ನಾಯಕತ್ವ ಬದಲಾವಣೆ ಹೈಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ಸ್ವತಃ ಯಡಿಯೂರಪ್ಪನವರೆ ಹೇಳಿದ್ದಾರೆ, ಹೈಕಮಾಂಡ್ ರಾಜೀನಾಮೆ ನೀಡು ಎಂದರೆ ನೀಡುತ್ತೇನೆ ಎಂದು. ರಾಜ್ಯಧ್ಯಕ್ಷ ನಳೀನಕುಮಾರ ಕಟೀಲ, ನಾಯಕತ್ವ ಬದಲಾವಣೆ ಇಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ನಮ್ಮ ತೀರ್ಮಾನಗಳು ಏನಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಅಂತಾ ಹೇಳಿದ್ರು.