17 ಜನ ವಲಸೆ ಶಾಸಕರಿಂದಲೇ ಗೊಂದಲ: ಸಚಿವ ಈಶ್ವರಪ್ಪ

229

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕಥೆ ಸಧ್ಯಕ್ಕೆ ಮುಗಿಯುವಂತೆ ಕಾಣ್ತಿಲ್ಲ. ನಾಳೆ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಕರ್ನಾಟಕಕ್ಕೆ ಬರ್ತಿದ್ದಾರೆ. ಅವರ ಮಂದಿ ನಾಯಕತ್ವಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಯಲಿದೆಯಂತೆ.

ಇದರ ನಡುವೆ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ನಿಂದ ಬಿಜೆಪಿಗೆ ವಲಸೆ ಬಂದ 17 ಜನ ಶಾಸಕರಿಂದಲೇ ಇಷ್ಟೆಲ್ಲ ಗೊಂದಲ ಸೃಷ್ಟಿಯಾಗ್ತಿದೆ ಎಂದಿದ್ದಾರೆ. ಬಿಜೆಪಿಗೆ ಬಹುಮತ ಇದ್ದಿದ್ರೆ ಈ ಸಮಸ್ಯೆ ಬರ್ತಿರಲಿಲ್ಲ. ಕಾಂಗ್ರೆಸ್, ಜೆಡಿಎಸ್ ಸರ್ಕಾರದಲ್ಲಿ ಸರಿಯಿಲ್ಲ ಎಂದು ಬಂದವರು ಸಮಸ್ಯೆ ಮಾಡ್ತಿದ್ದಾರೆ ಅಂತಾ ಅಸಮಾಧನ ವ್ಯಕ್ತಪಡಿಸಿದ್ದಾರೆ.

ಅರುಣ ಸಿಂಗ್ ಜೊತೆಗೆ ನಮ್ಮ ನಾಯಕರು ಸೇರಿದಂತೆ ಎಲ್ಲರೂ ಸೇರಿ ಚರ್ಚೆ ಮಾಡುತ್ತೇವೆ. ಚರ್ಚೆಗೆ ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಎಲ್ಲ ಗೊಂದಲಕ್ಕೂ ತೆರೆ ಎಳೆಯಲಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!