ಪ್ರಜಾಸ್ತ್ರ ಸುದ್ದಿ
ಮುಂಬೈ: ಖ್ಯಾತ ಹಿರಿಯ ಗಝಲ್ ಗಾಯಕ ಪಂಕಜ್ ಉದಾಸ್ ಸೋಮವಾರ ನಿಧನರಾಗಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಪದ್ಮಶ್ರೀ ಪುರಸ್ಕೃತ ಪಂಕಜ್ ಉದಾಸ್ ನಿಧನಕ್ಕೆ ಸಂಗೀತ ಕ್ಷೇತ್ರದ ಗಣ್ಯರು ಸೇರಿದಂತೆ ಅವರ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಪಂಕಜ್ ಉದಾಸ್ ನಿಧನದ ಕುರಿತು ಅವರ ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ. ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾಲಿವುಡ್ ಸಿನಿ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಇದರ ಜೊತೆಗೆ ಹಲವು ಟಿವಿ ಶೋಗಳಲ್ಲಿ ಭಾಗವಹಿಸಿದ್ದರು. ಆಲ್ಬಂ ಸಾಂಗ್ಸ್ ಸಹ ಬಿಡುಗಡೆ ಮಾಡಿದ್ದಾರೆ.
ಪಂಜಕ್ ಉದಾಸ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ತಮ್ಮ ಗಝಲ್ ಹಾಡಿನ ಮೂಲಕ ನೇರವಾಗಿ ಆತ್ಮದೊಂದಿಗೆ ಮಾತನಾಡುತ್ತಿದ್ದರು. ಭಾರತ ಸಂಗೀತದ ದಾರಿದೀಪವಾಗಿದ್ದರು. ಅವರ ಮಧುರವು ತಲೆಮಾರುಗಳನ್ನು ಮೀರಿದೆ. ಈ ಸಂದರ್ಭದಲ್ಲಿ ಅವರೊಂದಿಗೆ ನಡೆಸಿದ ಸಂವಾದವನ್ನು ನೆನಪು ಮಾಡಿಕೊಳ್ಳುತ್ತೇನೆ ಎಂದಿದ್ದಾರೆ ಎಂದಿದ್ದಾರೆ.