ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಐಟಿ ಸಿಟಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜನರು ಆತಂಕದಲ್ಲಿದ್ದಾರೆ. ಹೊಸ ವರ್ಷದ ಸಂಭ್ರಮಾಚರಣೆಯ ಉತ್ಸಾಹದಲ್ಲಿರುವ ಜನರಿಗೆ ಚಿರತೆ ಟೆನ್ಷನ್ ಕೊಟ್ಟಿದೆ. ಸಿದ್ದನಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷವಾಗಿ ಜನರಿಗೆ ಭಯ ಮೂಡಿಸಿದೆ.
ಬಿಎಂ ಕಾವಲು ಅರಣ್ಯ ಪ್ರದೇಶದ ಹತ್ತಿರದಲ್ಲಿ ಕಳೆದ ರಾತ್ರಿ ಕೊಟ್ಟಗೆಯಲ್ಲಿದ್ದ ಕರುವನ್ನು ಚಿರತೆ ತಿಂದಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದೆ ನೈಸ್ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅಲ್ಲದೆ ದಾಳಿಯೂ ನಡೆಸಿತ್ತು. ಈಗ ಮತ್ತೆ ಕಾಣಿಸಿಕೊಂಡಿದ್ದು ಜನರ ನೆಮ್ಮದಿ ಕೆಡಸಿದೆ.