ಚಿರತೆ ದಾಳಿ: ಚಿಕಿತ್ಸೆ ಫಲಿಸದೆ ಬಾಲಕಿ ಸಾವು

121

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾಳೆ. ಕಗ್ಗಲಗುಂದಿ ಗ್ರಾಮದ ಸುಶೀಲಾ ಅನ್ನೋ ಬಾಲಕಿ ಮೃತಪಟ್ಟಿದ್ದಾಳೆ.

ಕಳೆದ ಜೂನ್ 26ರಂದು ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿದೆ. ಬಾಲಕಿ ಜೋರಾಗಿ ಕೂಗಿಕೊಂಡಾಗ ಗ್ರಾಮಸ್ಥರು ಸೇರಿದ್ದಾರೆ. ಆಗ ಚಿರತೆ ಬಾಲಕಿ ಬಿಟ್ಟು ಓಡಿ ಹೋಗಿದೆ. ತೀವ್ರ ಗಾಯಗೊಂಡಿದ್ದ ಬಾಲಕಿ ಕಳೆದ 15ಕ್ಕೂ ಹೆಚ್ಚು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ, ದುರಾದೃಷ್ಟವಶಾತ್ ಇಂದು ಕೊನೆಯುಸಿರೆಳೆದಿದ್ದಾಳೆ.

ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಮೂರು ಕಡೆ ಬೋನ್ ಗಳನ್ನು ಇಟ್ಟಿದೆ. ಆದರೂ ಇದುವರೆಗೂ ಚಿರತೆ ಸಿಕ್ಕಿ ಬಿದ್ದಿಲ್ಲ. ಹೀಗಾಗಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನೆಷ್ಟು ಜೀವಗಳು ಬಲಿಯಾಗಬೇಕು ಅಂತಿದ್ದಾರೆ.




Leave a Reply

Your email address will not be published. Required fields are marked *

error: Content is protected !!