ಮೈಸೂರಲ್ಲಿ ನಾಲ್ವರನ್ನು ಬಲಿ ಪಡೆದಿದ್ದ ಚಿರತೆ ಸೆರೆ

195

ಪ್ರಜಾಸ್ತ್ರ ಸುದ್ದಿ

ಮೈಸೂರು: ಜನವರಿ 12ರಂದು 11 ವರ್ಷದ ಬಾಲಕನನ್ನು ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದಲ್ಲಿ ಬಲಿ ಪಡೆದಿದ್ದ ಚಿರತೆಯನ್ನು ಗುರುವಾರ ಸೆರೆ ಹಿಡಿಯಲಾಗಿದೆ. ಬಾಲಕ ಸೇರಿದಂತೆ 4 ಜನರನ್ನು ಚಿರತೆ ಕೆಲ ತಿಂಗಳಲ್ಲಿ ಬಲಿ ಪಡೆದಿದೆ.

ಚಿರತೆ ದಾಳಿಯಿಂದ ಜೀವ ಕಳೆದುಕೊಳ್ಳುತ್ತಿರುವ ಜನರು ಹೋರಾಟದ ಹಾದಿ ಹಿಡಿದಿದ್ದರು. ತಮ್ಮವರನ್ನು ಕಳೆದುಕೊಂಡು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದರು. ಅರಣ್ಯಾಧಿಕಾರಿಗಳು ಇದೀಗ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಈ ಬಗ್ಗೆ ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿ, ಇನ್ನು ಮುಂದೆ ಇಂತಹ ಪ್ರಕರಣಗಳು ಮುರುಕಳಿಸದಂತೆ ಚಿರತೆ ಕಾರ್ಯಪಡೆಯನ್ನು ರಚಿಸಿ ಇಂದೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!