ಪ್ರಜಾಸ್ತ್ರ ಸುದ್ದಿ
ಸಿಂದಗಿ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ದೇವರನಾವದಗಿ ಗ್ರಾಮ ಸೇರಿದಂತೆ ಸುತ್ತಲಿನ ಹಲವು ಪ್ರದೇಶಗಳಲ್ಲಿ ಕಳೆದ ಹಲವು ದಿನಗಳಿಂದ ಚಿರತೆಯೊಂದು ಜನರಲ್ಲಿ ಭಯ ಮೂಡಿಸಿತ್ತು. ದನಕರುಗಳನ್ನ ತಿಂದು ಹಾಕುವ ಮೂಲಕ ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿತ್ತು. ಇದೀಗ ಚಿರತೆ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಚಿರತೆ ಯಾವಾಗ ಸಾವನ್ನಪ್ಪಿದೆ ಅನ್ನೋದು ಸರಿಯಾಗಿ ತಿಳಿದು ಬಂದಿಲ್ಲ. ಆದ್ರೆ, ಚಿರತೆ ದೇಹ ಕೊಳೆಯುವ ಹಂತದಲ್ಲಿ ಪತ್ತೆಯಾಗಿದೆ. ಹೀಗಾಗಿ ಅಂದಾಜು ಎರಡು ದಿನಗಳ ಹಿಂದೆ ಸಾವನ್ನಪ್ಪಿರಬಹುದು ಎನ್ನಲಾಗ್ತಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಸಾವಿಗೆ ನಿಖರ ಕಾರಣವೇನು ಅನ್ನೋದರ ತನಿಖೆ ನಡೆಯುತ್ತಿದೆ.