ರಾಮನಗರ: ಮಾಗಡಿ ತಾಲೂಕಿನ ಕದರಯ್ಯನಪಾಳ್ಯದಲ್ಲಿ ಮೂರು ವರ್ಷದ ಮಗುವನ್ನ ತಿಂದಿದ್ದ ಚಿರತೆ ಸೆರೆ ಸಿಕ್ಕಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸೋಮವಾರ ಇಟ್ಟಿದ್ದ ಬೋನಿನಲ್ಲಿ 2 ವರ್ಷದ ಗಂಡು ಚಿರತೆ ಸಿಕ್ಕಿಹಾಕಿಕೊಂಡಿದೆ.
ಚಂದ್ರಪ್ಪ ಹಾಗೂ ಮಂಗಳಗೌರಮ್ಮ ದಂಪತಿಯ 3 ವರ್ಷದ ಮಗು ಹೇಮಂತ, ಕಳೆದ ಶುಕ್ರವಾರ ರಾತ್ರಿ ಚಿರತೆ ದಾಳಿಗೆ ಬಲಿಯಾಗಿದ್ದ. ಮನೆಯವರು ಗಾಢ ನಿದ್ದೆಯಲ್ಲಿದ್ದಾಗ ಚಿರತೆ ಬಂದು ಮಗವನ್ನ, ಮನೆಯಿಂದ 60 ಮೀಟರ್ ದೂರದಲ್ಲಿ ಒಯ್ದು ತಿಂದಿತ್ತು.
ಇದೀಗ ಚಿರತೆ ಸೆರೆ ಸಿಕ್ಕಿದ್ದು, ಗ್ರಾಮಸ್ಥರಲ್ಲಿ ಸ್ವಲ್ಪ ನಿರಾಳತೆ ಮೂಡಿದೆ. ಮತ್ತೆ ಈ ರೀತಿಯ ಘಟನೆ ಮರುಕಳಿಸದಿರಲಿ ಎಂದು ದೇವರಲ್ಲಿ ಬೇಡಿಕೊಳ್ತಿದ್ದಾರೆ.