ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪತ್ರ: ಸಿಎಂ ಸಿದ್ದರಾಮಯ್ಯ

107

ಪ್ರಜಾಸ್ತ್ರ ಸುದ್ದಿ

ಹಾಸನ: ರಾಜ್ಯಕ್ಕೆ ಕೂಡಲೇ ಬರ ಪರಿಹಾರದ ಅನುದಾನ ಬಿಡುಗಡೆ ಮಾಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಗೆ ಬರ ಸಮೀಕ್ಷೆ ಕುರಿತು ಸಭೆ ನಡೆಸಲು ಬಂದಿದ್ದ ವೇಳೆ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಬರದಿಂದ 37,700 ಕೋಟಿ ಬೆಳೆ ನಷ್ಟವಾಗಿದೆ. ಎನ್ ಡಿಆರ್ ಎಫ್, ಎಸ್ ಡಿಆರ್ ಎಫ್ ನಿಯಮದಂತೆ 17,900 ಕೋಟಿ ಪರಿಹಾರ ಬಿಡುಗಡೆಗೆ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೇವೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಹಾಗೂ ರಾಜ್ಯಗಳು ಸಮನ್ವಯದಿಂದ ಕೆಲಸ ಮಾಡಬೇಕು. ಕೇಂದ್ರಕ್ಕೆ ತೆರಿಗೆ ಹಣ ಕಟ್ಟುತ್ತೇವೆ. ಸಮಯಕ್ಕೆ ಸರಿಯಾಗಿ ಪರಿಹಾರ ನೀಡಬೇಕು ಎಂದರು.

ಯಡಿಯೂರಪ್ಪ ಹೇಳಿಕೆ ಸಂಬಂಧ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಮೋದಿಯವರು ನನ್ನ ವಿರುದ್ಧ ಮಾತನಾಡಬಹುದೇ? ಮಧ್ಯಪ್ರದೇಶ ಚುನಾವಣೆ ಪ್ರಚಾರದಲ್ಲಿ ಕರ್ನಾಟಕದ ಬಗ್ಗೆ ಯಾಕೆ ಮಾತನಾಡಿದರು ಅಂತಾ ಪ್ರಶ್ನಿಸಿದರು.




Leave a Reply

Your email address will not be published. Required fields are marked *

error: Content is protected !!