ನಾಸೀರ್ ಗೆ ಪ್ರಮಾಣ ವಚನ ಬೋಧಿಸದಂತೆ ಪತ್ರ

111

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಪ್ರಕರಣದ ತನಿಖೆ ಮುಗಿಯುವ ತನಕ ರಾಜ್ಯಸಭಾ ಸದಸ್ಯ ನಾಸೀರ್ ಹುಸೈನ್ ಗೆ ಪ್ರಮಾಣ ವಚನ ಬೋಧಿಸದಂತೆ ಉಪ ರಾಷ್ಟ್ರಪತಿಗೆ ಪತ್ರ ಬರೆಯಲಾಗಿದೆ.

ನಿವೃತ್ತ ಐಎಎಸ್, ಐಪಿಎಸ್ ಅಧಿಕಾರಿಗಳು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪತ್ರ ಬರೆದಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಳ್ಳುವ ತನಕ ಪ್ರಮಾಣ ವಚನ ಬೋಧಿಸದಂತೆ ಮನವಿ ಸಲ್ಲಿಸಲಾಗಿದೆ.

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಾಸೀರ್ ಹುಸೇನ್ ಸಂಭ್ರಮಾಚರಣೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಳಿ ಬಂದಿದೆ. ಖಾಸಗಿ ಎಫ್ಎಸ್ಎಲ್ ವರದಿಯಲ್ಲಿಯೂ ಇದು ದೃಢಪಟ್ಟಿದೆ.




Leave a Reply

Your email address will not be published. Required fields are marked *

error: Content is protected !!