ಸತ್ಯಾಗ್ರಹಕ್ಕೆ ಸಿಂದಗಿ ಕೊಡುಗೆ ಸಿಂಹಪಾಲು: ಕೂಡಲಸಂಗಮ ಶ್ರೀ

368

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಸತ್ಯಾಗ್ರಹ, ಹೊಸ ತಾತ್ವಿಕತೆಗೆ ಮುನ್ನುಡಿ, ಉಪವಾಸ ಸತ್ಯಾಗ್ರಹಕ್ಕೆ ಸಿಂದಗಿಯ ಕೊಡುಗೆ ಸಿಂಹಪಾಲು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮಿಗಳು ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ, ಪ್ರಥಮ ಜಗದ್ಗುರುಗಳ ಸಾನಿಧ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಉಪ ಮೀಸಲಾತಿಗಳನ್ನು ಕೇಂದ್ರ ಸರಕಾರ ಓಬಿಸಿ ಮೀಸಲಾತಿಗಾಗಿ ವಿಜಯಪುರ ಜಿಲ್ಲಾ ಮಟ್ಟದ ಸಾಮೂಹಿಕ ಇಷ್ಟಲಿಂಗ ಪೂಜೆಯೊಂದಿಗೆ ಹಮ್ಮಿಕೊಂಡ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕಳೆದ ಮೂರು ವರ್ಷಗಳಿಂದ 2ಎ ಮೀಸಲಾತಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಬೋಮ್ಮಾಯಿಯವರು 2ಎ ಮೀಸಲಾತಿ ನೀಡುವುದಾಗಿ ಹೇಳಿ ಅನ್ಯಾಯ ಮಾಡಿದ ಪರಿಣಾಮವಾಗಿಯೇ ಇಂದು ಬಿಜೆಪಿಗೆ ಹಿನ್ನೆಡೆಯಾಗಿದೆ. ನಮ್ಮ ಪಂಚಮಸಾಲಿ ಸಮಾಜವು ಪ್ರತಿಯೊಂದನ್ನೂ ಹೋರಾಟ ಮಾಡಿ ಪಡೆದುಕೊಳ್ಳುವ ಸ್ಥಿತಿಯಿದೆ ಎಂದರು. ಸಮಾಜದ ಜಿಲ್ಲಾಧ್ಯಕ್ಷ ಬಿ.ಎಮ್. ಪಾಟೀಲ, ತಾಲೂಕಾಧ್ಯಕ್ಷ ಎಂ.ಎಂ ಹಂಗರಗಿ, ಡಾ.ಅರವಿಂದ ಮನಗೂಳಿ, ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಮಾತನಾಡಿದರು.

ಇದೇ ಸಂದರ್ಭದಲ್ಲಿ ಆಸಂಗಿಹಾಳದ ಶಂಕರಾನಂದ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಬಾಗೇವಾಡಿ ತಾಲೂಕಾಧ್ಯಕ್ಷ ಶಿವಾನಂದ ಮಂಗನವರ, ಸೋಮನಗೌಡ ಬಿರಾದಾರ, ಶ್ರೀಶೈಲ ಯಳಮೇಲಿ, ಆನಂದ ಶಾಬಾದಿ, ಮಲ್ಲನಗೌಡ ಪಾಟೀಲ, ಶಿವರಾಜ ಪಾಟೀಲ, ಚಂದ್ರಶೇಖರ ನಾಗರಬೆಟ್ಟ, ಶಿವು ಬಡಾನೂರ, ಡಾ.ಅಂಬರೀಶ ಬಿರಾದಾರ ಸೇರಿದಂತೆ ಸಮಾಜದ ಬಂಧು ಬಾಂಧವರು ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!