ಹಾವೇರಿ ಟಿಕೆಟ್ ಬದಲಾವಣೆಗೆ ಅವಕಾಶ: ರಮೇಶ್ ಜಾರಕಿಹೊಳಿ

95

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಕೆ.ಎಸ್ ಈಶ್ವರಪ್ಪನವರಿಗೆ ಪದೆಪದೆ ಅನ್ಯಾಯವಾಗುತ್ತಿದೆ. ಪುತ್ರನಿಗೆ ಟಿಕೆಟ್ ತಪ್ಪಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಅವರ ಮನವೊಲಿಸುವ ಯತ್ನ ನಡೆದಿದೆ ಎಂದು ಬಿಜೆಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿನ ಈಶ್ವರಪ್ಪ ಮನೆಗೆ ಭೇಟಿ ನೀಡಿದ ಅವರು ಗೌಪ್ಯವಾಗಿ ಚರ್ಚೆ ನಡೆಸಿದರು. ಇನ್ನೂ ಕೂಡ ಸಮಯ ಮೀರಿಲ್ಲ. ಈಶ್ವರಪ್ಪ ಪುತ್ರ ಕಾಂತೇಶಗೆ ಟಿಕೆಟ್ ಕೊಡಿಸುವ ಪ್ರಯತ್ನ ಮಾಡುತ್ತೇವೆ. ದೆಹಲಿಗೆ ಹೋಗಿ ವರಿಷ್ಠರೊಂದಿಗೆ ಚರ್ಚಿಸುತ್ತೇನೆ. ಈಗಲೂ ಕಾಂತೇಶಗೆ ಟಿಕೆಟ್ ನೀಡಲು ಅವಕಾಶವಿದೆ ಎಂದರು.

ರಮೇಶ ಜಾರಕಿಹೊಳಿ ಅವರ ಈ ಮಾತಿನಿಂದಾಗಿ ಈಗಾಗ್ಲೇ ಹಾವೇರಿಗೆ ಬಸವರಾಜ್ ಬೊಮ್ಮಾಯಿ ಅವರ ಹೆಸರು ಘೋಷಣೆಯಾಗಿದೆ. ನಾಳೆ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದೆ. ಕೊನೆಯ ಕ್ಷಣದಲ್ಲಾದರೂ ಅಭ್ಯರ್ಥಿ ಬದಲಾಗಬಹುದು ಎಂದು ತಿಳಿದು ಬರುತ್ತಿದೆ. ಇನ್ನು ಬೆಳಗಾವಿಗೆ ಸ್ಥಳೀಯರಿಗೆ ಅವಕಾಶ ನೀಡಬೇಕು ಎನ್ನುವ ಮೂಲಕ ಜಗದೀಶ್ ಶೆಟ್ಟರ್ ಆಗಮನಕ್ಕೆ ವಿರೋಧ ವ್ಯಕ್ತವಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!