ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ಸೋಂಕಿನ 2ನೇ ಅಲೆಯಿಂದಾಗಿ ಕರ್ನಾಟಕ ತತ್ತರಿಸಿ ಹೋಗಿದೆ. ಹೀಗಾಗಿ ಮೇಲಿಂದ ಮೇಲೆ ಲಾಕ್ ಡೌನ್ ಮಾಡ್ತಿದ್ರೂ ನಿಯಂತ್ರಣಕ್ಕೆ ಬರ್ತಿಲ್ಲ. ಜನರ ಸಾವು ನೋವು ಹೆಚ್ಚಾಗಿದೆ. ಹೀಗಾಗಿ ಇಂದಿನಿಂದ ಮೇ 24ರ ತನಕ ಲಾಕ್ ಡೌನ್ ಘೋಷಿಸಲಾಗಿದೆ.
ಈ ಬಗ್ಗೆ ಜನರಲ್ಲಿ ಮನವಿ ಮಾಡಿಕೊಂಡಿರುವ ಸಿಎಂ, ಕರೋನಾ ನಿಯಂತ್ರಣಕ್ಕೆ ಜನರು ಸಹಕರಿಸಬೇಕು. 14 ದಿನಗಳ ನಿರ್ಬಂಧವನ್ನ ಕಟ್ಟುನಿಟ್ಟಾಗಿ ಪಾಲಿಸೋಣ. ಮನೆಯಲ್ಲೇ ಇರಿ. ನಾವೆಲ್ಲ ಒಟ್ಟಾಗಿ ಕರೋನಾವನ್ನು ಹಿಮ್ಮೆಟ್ಟಿಸೋಣ ಎಂದಿದ್ದಾರೆ.