ಪ್ರಜಾಸ್ತ್ರ ಸದ್ದಿ
ಬೆಂಗಳೂರು: ಇನ್ನು ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ 14 ದಿನಗಳ ಕಾಲ್ ಸಂಪೂರ್ಣ ಬಂದ್ ಮಾಡಿ ಆದೇಶಿಸಲಾಗಿದೆ. ಅಗತ್ಯ ಸೇವೆಗಳಿಗೆ ಬೆಳಗ್ಗೆ 6 ರಿಂದ 10 ಗಂಟೆಯ ತನಕ ಅವಕಾಶ ನೀಡಲಾಗಿದೆ. ಅದಾದ್ಮೇಲೆ ಎಲ್ಲವೂ ಬಂದ್. ಇದರ ಜೊತೆಗೆ ಮುಂಬರುವ ಚುನಾವಣೆಯನ್ನ ಮುಂದೂಡಲು ಶಿಫಾರಸು ಮಾಡಲಾಗಿದೆ.
ರಾಜ್ಯದಲ್ಲಿ 14 ದಿನ ಲಾಕ್ ಡೌನ್ ಘೋಷಣೆ ಮಾಡಿರುವುದ್ರಿಂದ, ಮುಂಬರುವ ನಗರ ಸಭೆ ಚುನಾವಣೆ ಸೇರಿದಂತೆ ಎಲ್ಲ ಚುನಾವಣೆಗಳನ್ನ ಮುಂದೂಡುವಂತೆ ಚುನಾವಣೆ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.