ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯದಂತೆ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗ್ತಿದೆ. ಆದ್ರೆ, ಕಂಟೈನ್ಮೆಂಟ್ ಏರಿಯಾಗಳಲ್ಲಿ ಲಾಕ್ ಡೌನ್ ಈಗ ಇರುವಂತೆ ಮುಂದೆವರೆಯಲಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಬಗ್ಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದ್ರಿಂದಾಗಿ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ. ಆದ್ರೆ, ಅಂತರ ರಾಜ್ಯ, ಜಿಲ್ಲೆ ಸಂಚಾರವಾಗಲಿ, ಸಾರಿಗೆ ಸೇವೆ ಆಗ್ಲಿ ಇರುವುದಿಲ್ಲ. ಮಾಲ್, ಥಿಯೇಟರ್, ಮೇಟ್ರೋ ಸೇರಿದಂತೆ ರೈಲು ಸಂಚಾರ ಇರುವುದಿಲ್ಲ. ಈ ಮೂಲಕ ಕೇಂದ್ರ ಸರ್ಕಾರದ ಮಾರ್ಗಸೂಚಿ ಅನುಸಾರವಾಗಿ ರಾಜ್ಯದಲ್ಲಿಯೂ ನಾಳೆಯಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗ್ತಿದೆ.
ಕರೋನಾ ಹಾಟ್ ಸ್ಪಾಟ್ ಎಂದು ಗುರುತಿಸಿಕೊಂಡಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಎಂದಿನಂತೆ ಮುಂದುವರೆಯಲಿದೆ. ಅಲ್ಲಿ ಮಾತ್ರ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ. ಹೀಗಾಗಿ ಸರ್ಕಾರ ಸೂಚಿಸಿದಂತೆ ಕೆಲವುಗಳಿಗೆ ಮಾತ್ರ ವಿನಾಯ್ತಿ ನೀಡಲಾಗಿದೆ.