ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಜೂನ್ 7ರ ನಂತರ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ಮುಂದುವರೆಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಜೂನ್ 3ರಂದು ಘೋಷಿಸಿದ್ರು. ಇದೀಗ ಲಾಕ್ ಡೌನ್ ಸಡಿಲಿಕೆ ಸುಳಿವು ನೀಡಿದ್ದಾರೆ.
ಈ ಬಗ್ಗೆ ಶನಿವಾರ ಗೃಹಕಚೇರಿ ಕೃಷ್ಣಾದಲ್ಲಿ ಮಾತ್ನಾಡಿರುವ ಸಿಎಂ, ಇನ್ನು ಮೂರ್ನಾಲ್ಕು ದಿನ ವಿಶ್ಲೇಷಣೆ ಮಾಡಲಾಗುತ್ತೆ. ಯಾವ ಜಿಲ್ಲೆಯಲ್ಲಿ ಹೇಗಿದೆ ಅನ್ನೋದು ನೋಡಿಕೊಂಡು ಸಡಿಲಿಕೆ ಮಾಡುವ ಕುರಿತು ಚಿಂತನೆ ನಡೆಸುವುದಾಗಿ ಹೇಳಿದ್ದಾರೆ.