ಅಗತ್ಯ ಸೇವೆಗೆ ಸೋಮವಾರದಿಂದ ಮಧ್ಯಾಹ್ನ 2 ಗಂಟೆ ತನಕ ಅವಕಾಶ

244

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ರೆ ಜೂನ್ 14ಕ್ಕೆ ಲಾಕ್ ಡೌನ್ ಮುಗಿದು ಹೋಗ್ತಿತ್ತು. ಆದ್ರೆ, ಇನ್ನು ಅಂದುಕೊಂಡಷ್ಟು ನಿಯಂತ್ರಣಕ್ಕೆ ಬಾರದ ಕಾರಣ, ಇನ್ನೊಂದು ವಾರ ಮುಂದುವರೆಸಲಾಗಿದೆ. ಆದ್ರೆ, ಒಂದಿಷ್ಟು ಸಡಿಲಿಕೆ ಕೊಟ್ಟಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಹೌದ್ ಸೋಮವಾರದಿಂದ ಮುಂದಿನ ಒಂದು ವಾರಗಳ ಕಾಲ ಅಂದ್ರೆ ಜೂನ್ 21ರ ತನಕ ಮಧ್ಯಾಹ್ನ 2 ಗಂಟೆಯ ತನಕ ಅವಕಾಶ ನೀಡಲಾಗಿದೆ. ಈ ಮೂಲಕ ಜನರಿಗೆ ಒಂದಿಷ್ಟು ನಿರಾಳತೆ ನೀಡಿದೆ. ಕಟ್ಟಡ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಆಟೋ, ಟ್ಯಾಕ್ಸಿ ಸೇವೆಗೂ ಸಹ ಅವಕಾಶ ನೀಡಲಾಗಿದೆ. ಇದರ ಜೊತೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದ್ದು, ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆಯ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಇನ್ನು ಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗ, ಮೈಸೂರು, ಬೆಂಗಳೂರು ಗ್ರಾಮಾಂತರ, ಹಾಸನ ಸೇರಿದಂತೆ 8 ಜಿಲ್ಲೆಗಳಲ್ಲಿ ಕಠಿಣ ಲಾಕ್ ಡೌನ್ ಮುಂದುವರೆದಿದೆ.




Leave a Reply

Your email address will not be published. Required fields are marked *

error: Content is protected !!