ಪ್ರಜಾಸ್ತ್ರ ಸುದ್ದಿ
ರಾಯಚೂರು: ಕರೋನಾ ಲಾಕ್ ಡೌನ್ ಇರುವುದ್ರಿಂದ ಶಿಕ್ಷಣ ಸಂಸ್ಥೆ ಸೇರಿದಂತೆ ಕೆಲವೊಂದಕ್ಕೆ ವಿನಾಯ್ತಿ ನೀಡಿಲ್ಲ. ಆದ್ರೆ, ಜಿಲ್ಲೆಯ ಕಾಲೇಜೊಂದರಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ಭರ್ಜರಿ ಮಸ್ತಿ ಮಾಡಲಾಗಿದೆ.
ರಾಯಚೂರಿನಲ್ಲಿ ಕರೋನಾ ಅಟ್ಟಹಾಸ ಜೋರಾಗಿದೆ. ಆದ್ರೆ, ಮಾನವಿಯ ಖಾಸಗಿ ಕಾಲೇಜಿನಲ್ಲಿ ಒರಿಯಂಟೇಷನ್ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇದರಲ್ಲಿ ಭಾಗವಹಿಸಿದ ನೂರಾರು ವಿದ್ಯಾರ್ಥಿಗಳು ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ.
ಮಾಸ್ಕ್ ಧರಿಸಿಲ್ಲ. ಸಾಮಾಜಿಕ ಅಂತರ ಕಾಪಾಡಿಕೊಂಡಿಲ್ಲ. ಮೊದಲೇ ಮಾತು ಕಾರ್ಯಕ್ರಮ ಆಯೋಜನೆ ಮಾಡಿರುವುದೇ ಲಾಕ್ ಡೌನ್ ನಿಯಮ ಉಲ್ಲಂಘಿಸಿ. ಹೀಗಾಗಿ ಕಾಲೇಜು ಆಡಳಿತ ಮಂಡಳಿ ಕಾರ್ಯ ವೈಖರಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸ್ತಿದ್ದು, ಉನ್ನತ ಶಿಕ್ಷಣ ಸಚಿವರು ಈ ಬಗ್ಗೆ ಏನು ಕ್ರಮ ತೆಗೆದುಕೊಳ್ತಾರೆ.