ವಿಜಯೇಂದ್ರ ಅಳಿಯನ ಮನೆ ಸೇರಿ 63 ಕಡೆ ಲೋಕಾ ದಾಳಿ

188

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರ, ಯಾದಗಿರಿಯ ಡಿಎಚ್ಓ ಆಗಿರುವ ಡಾ.ಪ್ರಭುಲಿಂಗ ಮಾನಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರಗಿಯ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸ, ಫಾರ್ಮ್ ಹೌಸ್, ಯಾದಗಿರಿಯ ಮನೆ ಮೇಲೆ ದಾಳಿ ನಡೆಸಲಾಗಿದೆ.

ಇಂದು ಮುಂಜಾನೆ ಒಟ್ಟು 63 ಕಡೆ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಬೆಂಗಳೂರಿನಲ್ಲಿ 3 ಕಡೆ, ಮೈಸೂರಿನಲ್ಲಿ 12 ಕಡೆ, ಬಳ್ಳಾರಿ, ಬೀದರ್, ವಿಜಯನಗರ, ಕಲಬುರಗಿ ಸೇರಿ 63 ಕಡೆ ಪರಿಶೀಲನೆ ನಡೆದಿದೆ.

ಬೆಸ್ಕಾಂ ಜಾಗೃತದಳದ ಅಧಿಕಾರಿ ಟಿ.ಎನ್ ಸುಧಾಕರ್ ರೆಡ್ಡಿ, ಹಾಲು ಉತ್ಪಾದಕರ ಸಹಕಾರ ಸಂಘದ ಸಿಇಒ ಹೆಚ್.ಎಸ್ ಕೃಷ್ಣಮೂರ್ತಿ, ನಂಜನಗೂಡು ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಮಹದೇವಸ್ವಾಮಿ, ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಚಂದ್ರಶೇಖರ್, ಅರಣ್ಯ ಇಲಾಖೆಯ ಡಿಆರ್ ಎಫ್ಓ ಮಾರುತಿ, ಬೀದರ್ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ನೌಕರ ಸುನಿಲ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಮನೆ, ಕಚೇರಿ, ಫಾರ್ಮ್ ಸೇರಿ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!