ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಕೆ.ಆರ್ ಪುರಂ ತಹಶೀಲ್ದಾರ್ ಮನೆ ಮೇಲೆ ಶನಿವಾರ ದಾಳಿ ಮಾಡಿದ್ದರು. ಇಂದು ಸಹ ಶೋಧ ಕಾರ್ಯ ನಡೆದಿದೆ. ಈ ಪ್ರಕರಣ ಸಂಬಂಧ ತಹಶೀಲ್ದಾರ್ ಅಜಿತ್ ರೈನನ್ನು ವಶಕ್ಕೆ ಪಡೆದಿದ್ದಾರೆ.
ಅಜಿತ್ ರೈಗೆ ಸಂಬಂಧಿಸಿದ 10 ಕಡೆ ಲೋಕಾ ದಾಳಿ ನಡೆದಿದೆ. 40 ಲಕ್ಷ ರೂಪಾಯಿ, 1.90 ಕೋಟಿ ಮೌಲ್ಯದ ವಸ್ತುಗಳು, 100 ಎಕರೆಗೂ ಮೀರಿದ ವಿವಿಧ ಆಸ್ತಿ ಪತ್ರಗಳು ಸೇರಿ ಬೇರೆಯವರ ಹೆಸರಿನಲ್ಲಿ ಬೇನಾಮಿ ಆಸ್ತಿ ಮಾಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.