ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ.ಆರ್ ಪುರ ತಾಲೂಕಿನ ತಹಶೀಲ್ದಾರ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ನಡೆಸಿದ್ದಾರೆ. ಕೆ.ಆರ್ ಪುರಂನಲ್ಲಿರುವ ಮನೆ ಸೇರಿದಂತೆ 10 ಕಡೆ ದಾಳಿ ನಡೆಸಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕೆ.ಆರ್ ಪುರ ತಹಶೀಲ್ದಾರ್ ಅಜೀತ್ ರೈ ಅವರ ಮನೆ ಸೇರಿದಂತೆ ವಿವಿಧ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.