ಪ್ರಜಾಸ್ತ್ರ ಸುದ್ದಿ
ರಾಮನಗರ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಒಂದಾಗಲಿವೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಜೆಡಿಎಸ್ ನಾಯಕ, ಮಾಜಿ ಸಿಎಂ ಎಚ್ಡಿಕೆ ಪತ್ರಿಕ್ರಿಯೆ ನೀಡಿದ್ದು, ಹೊಂದಾಣಿಕೆ ಇಲ್ಲ ಎಂದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹೊಂದಾಣಿಕೆ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ. ಇದೆಲ್ಲ ವದಂತಿ. ರಾಜಕಾರಣದಲ್ಲಿ ಊಹಾಪೋಹಗಳು ಹುಟ್ಟುವುದು ಸಹಜ. ಚುನಾವಣೆ ಆರಂಭ ಆದ್ಮೇಲೆ ಇದಕ್ಕೆಲ್ಲ ಉತ್ತರ ಸಿಗಲಿದೆ ಅಂತಾ ಹೇಳಿದರು.