ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎರಡೂ ಕಡೆ ಸೋಲು ಅನುಭವಿಸಿದರು. ಈಗ ಅವರು 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಮೊನ್ನೆ ಪೆಟ್ಟು ತಡೆದುಕೊಂಡರೆ ಸಾಕಾಗಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಸಂಸದ ಜಿ.ಎಸ್ ಬಸವರಾಜು ತುಮಕೂರಿನಲ್ಲಿ ಮಾತನಾಡಿ, ವಿ.ಸೋಮಣ್ಣ ಲೋಕಸಭೆಗೆ ಸ್ಪರ್ಧಿಸುತ್ತಾರೆ. ನಾನು ಸ್ಪರ್ಧಿಸುವುದಿಲ್ಲ. ಅವರಿಗೆ ಎಲ್ಲರೂ ಬೆಂಬಲಕ್ಕೆ ನಿಲ್ಲಿ ಎಂದಿದ್ದರು. ಇದಕ್ಕೆ ಸ್ಪಷ್ಟನೆ ನೀಡಿದ ವಿ.ಸೋಮಣ್ಣ, ಹೈಕಮಾಂಡ್ ಮಾತಿಗೆ ಮನ್ನಣೆ ಕೊಟ್ಟು ಇಷ್ಟ ಇಲ್ಲದಿದ್ದರೂ ಎರಡು ಕಡೆ ಸ್ಪರ್ಧಿಸಿದೆ. ಮತ್ತೆ ಅಂತಹ ಪೆಟ್ಟು ತಿನ್ನಲು ಆಗಲ್ಲ. ಲೋಕಸಭಾ ಚುನಾವಣೆ ಆಕಾಂಕ್ಷಿಯೂ ನಾನಲ್ಲ. ನಾನು ಸ್ಪರ್ಧಿಸುವುದಿಲ್ಲವೆಂದು ಹೇಳಿದ್ದಾರೆ.