ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಪುತ್ರ ಕಾಂತೇಶನಿಗೆ ಹಾವೇರಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಕೊಡಿಸುವೆ. ಒಂದು ವೇಳೆ ಸಿಗದೆ ಇದ್ದಲ್ಲಿ ಶುಕ್ರವಾರ ಬೆಂಬಲಿಗರ ಸಭೆ ಕರೆದು ತೀರ್ಮಾನ ತೆಗೆದುಕೊಳ್ಳಲಾಗುವುದು. ನನಗೆ ಹಾವೇರಿ ಕೊಟ್ಟರೆ ಸ್ಪರ್ಧಿಸುವುದಿಲ್ಲ. ಅಗತ್ಯಬಿದ್ದರೆ ಶಿವಮೊಗ್ಗದಿಂದ ಸ್ಪರ್ಧಿಸುವೆ ಎಂದು ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಮಗನಿಗೆ ಟಿಕೆಟ್ ಪಡೆಯುವುದರ ಹಿಂದೆ ನನ್ನ ರಾಜಕೀಯ ಭವಿಷ್ಯ ಇಲ್ಲ. ಬಿಜೆಪಿ ಭವಿಷ್ಯ ಅಡಗಿದೆ ಎನ್ನುವ ಮೂಲಕ ಬಿಜೆಪಿ ಹೈಕಮಾಂಡ್ ಹಿಂದೆ ತೆಗೆದುಕೊಂಡ ಕೆಲ ತೀರ್ಮಾನಗಳಿಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.