ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿನಿಂದ ಜಗದೀಶ್ ಶೆಟ್ಟರ್ ಸ್ಪರ್ಧಿಸುತ್ತಾರ ಎನ್ನುವ ಪ್ರಶ್ನೆಗಳು ಎದ್ದಿವೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.
ಭಾನುವಾರ ಶೆಟ್ಟರ್ ನಿವಾಸದಲ್ಲಿ ಮಾತನಾಡಿದ ಸಿಎಂ, ಲೋಕಸಭೆಯಲ್ಲಿ ಸ್ಪರ್ಧೆ ಬಗ್ಗೆ ಶೆಟ್ಟರ್ ಅಭಿಪ್ರಾಯ ಕೇಳ್ತೀವಿ. ಅವರೂ ಆಕಾಂಕ್ಷಿ ಎಂದುಕೊಂಡಿದ್ದೀವಿ. ಶಾಸಕರು, ಹಿಂದಿನ ಸ್ಪರ್ಧಿಸಿದವರು, ಕಾರ್ಯಕರ್ತರ ಅಭಿಪ್ರಾಯ ಕೇಳ್ತೀವಿ ಎಂದರು.
ಪ್ರತಿಯೊಂದು ಜಿಲ್ಲೆಯಲ್ಲಿ ಸಚಿವರನ್ನು ವೀಕ್ಷಕರನ್ನಾಗಿ ಮಾಡಿದ್ದೀವಿ. ಅಭಿಪ್ರಾಯ ಸಂಗ್ರಹಿಸಿ ಮೂರು ಹೆಸರುಗಳನ್ನು ಅಂತಿಮ ಮಾಡಿ ಹೈಕಮಾಂಡ್ ಗೆ ಕಳಿಸುತ್ತೇವೆ. ಅದರಲ್ಲಿ ಯಾರು ಸೂಕ್ತರಾಗುತ್ತಾರೋ ಅವರಿಗೆ ಟಿಕೆಟ್ ನೀಡಲಾಗುತ್ತೆ ಎಂದರು.
ಇನ್ನು ಜಗದೀಶ್ ಶೆಟ್ಟರ್ ಮಾತನಾಡಿ, ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿ ಅಲ್ಲ. ಚುನಾವಣೆಯಲ್ಲಿ ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ. ಸಿಎಂ ಸಿದ್ದರಾಮಯ್ಯ ಸೇರಿ ಯಾರೂ ಈ ಬಗ್ಗೆ ನನ್ನೊಂದಿಗೆ ಚರ್ಚಿಸಿಲ್ಲ ಅಂತಾ ಹೇಳಿದ್ದಾರೆ.