ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದಾವಣಗೆರೆಯ ಚೆನ್ನಗಿರಿ ಮತಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಬರೋಬ್ಬರಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಐವರನ್ನು ಗುರುವಾರ ಬಂಧಿಸಲಾಗಿದೆ.
ಮಾಡಾಳ್ ಪ್ರಶಾಂತ್ ಜಲಮಂಡಳಿ ಹಾಗೂ ಎಸಿಬಿಯಲ್ಲಿ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕಚ್ಚಾ ಸಾಮಗ್ರಿ ಕಂಪನಿ ನಡೆಸುತ್ತಿದ್ದ ಶ್ರೇಯಸ್ ಕಶ್ಯಪ್ ಎಂಬುವರಿಗೆ ಹಣದ ಬೇಡಿಕೆ ಇಟ್ಟಿದ್ದನಂತೆ. ಹೀಗಾಗಿ ಅವರು ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
40 ಲಕ್ಷ ರೂಪಾಯಿಗೆ ಪ್ರಶಾಂತ್ ಬೇಡಿಕೆ ಇಟ್ಟಿದ್ದನಂತೆ. ಗುರುವಾರ 1.52 ಕೋಟಿ ರೂಪಾಯಿ ಪತ್ತೆಯಾಗಿತ್ತು. ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ಮುಂದುವರೆಸಿದಾಗ ಬರೋಬ್ಬರಿ 6 ಕೋಟಿ ರೂಪಾಯಿ ಪತ್ತೆಯಾಗಿರುವುದು ತಿಳಿದು ಬಂದಿದೆ. ಇನ್ನು ಹೆಚ್ಚಿನ ತನಿಖೆ ನಡೆಯುತ್ತಿದೆ.