ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಭೂಮಾಪನ ಇಲಾಖೆಯ ಅಧೀಕ್ಷಕ ಕೆ.ಟಿ ಶ್ರೀನಿವಾಸ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 5 ಮದ್ಯದ ಅಂಗಡಿಗಳನ್ನು ಹೊಂದಿರುವುದು ಬೆಳಕಿಗೆ ಬಂದಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಘಟಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ತುಮಕೂರು ಜಿಲ್ಲೆಯ 14 ಕಡೆ ದಾಳಿ ನಡೆಸಲಾಗಿದೆ.
ತುಮಕೂರು ಜಿಲ್ಲೆಯ 5 ಕಡೆ ಕೆ.ಟಿ ಶ್ರೀನಿವಾಸ ಮದ್ಯದ ಅಂಗಡಿ ಹೊಂದಿರುವುದನ್ನು ಪತ್ತೆ ಹಚ್ಚಲಾಗಿದೆ. ಇದರ ಜೊತೆಗೆ ಮನೆ, ನಿವೇಶನ ಸಹ ಹೊಂದಿದ್ದು, ತನಿಖೆ ನಡೆಯುತ್ತಿದೆ. ಹೀಗೆ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಬೀಳುತ್ತಿದ್ದರೂ, ಇದಕ್ಕೆ ಕಡಿವಾಣ ಬೀಳದೆ ಇರುವುದು ದುರಂತವೆಂದು ಸಾರ್ವಜನಿಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ.