5 ಮದ್ಯದ ಅಂಗಡಿ ಹೊಂದಿರುವ ಭೂಮಾಪನ ಅಧಿಕಾರಿ

179

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಭೂಮಾಪನ ಇಲಾಖೆಯ ಅಧೀಕ್ಷಕ ಕೆ.ಟಿ ಶ್ರೀನಿವಾಸ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, 5 ಮದ್ಯದ ಅಂಗಡಿಗಳನ್ನು ಹೊಂದಿರುವುದು ಬೆಳಕಿಗೆ ಬಂದಿದೆ.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಘಟಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇನ್ನು ತುಮಕೂರು ಜಿಲ್ಲೆಯ 14 ಕಡೆ ದಾಳಿ ನಡೆಸಲಾಗಿದೆ.

ತುಮಕೂರು ಜಿಲ್ಲೆಯ 5 ಕಡೆ ಕೆ.ಟಿ ಶ್ರೀನಿವಾಸ ಮದ್ಯದ ಅಂಗಡಿ ಹೊಂದಿರುವುದನ್ನು ಪತ್ತೆ ಹಚ್ಚಲಾಗಿದೆ. ಇದರ ಜೊತೆಗೆ ಮನೆ, ನಿವೇಶನ ಸಹ ಹೊಂದಿದ್ದು, ತನಿಖೆ ನಡೆಯುತ್ತಿದೆ. ಹೀಗೆ ಭ್ರಷ್ಟ ಅಧಿಕಾರಿಗಳು ಸಿಕ್ಕಿ ಬೀಳುತ್ತಿದ್ದರೂ, ಇದಕ್ಕೆ ಕಡಿವಾಣ ಬೀಳದೆ ಇರುವುದು ದುರಂತವೆಂದು ಸಾರ್ವಜನಿಕರು ಅಸಮಾಧಾನ ಹೊರ ಹಾಕುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!