ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಐಟಿ ಅಧಿಕಾರಿಗಳು ಸತತವಾಗಿ ದಾಳಿ ಮಾಡಿ ಕೋಟ್ಯಾಂತರ ರೂಪಾಯಿ ನಗದು, ಆಸ್ತಿ, ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಇದೀಗ ಲೋಕಾಯುಕ್ತ ದಾಳಿ ನಡೆದಿದೆ. ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯದ ವಿವಿಧ ಇಲಾಖೆ 17 ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ 75 ಸ್ಥಳಗಳ ಮೇಲೆ ಬರೋಬ್ಬರಿ 250 ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಿಗ್ಗೆಯಿಂದ ಅಧಿಕಾರಿಗಳ ಮನೆಗಳು, ಫಾರ್ಮ್ ಹೌಸ್ ಸೇರಿದಂತೆ ಅನೇಕ ಕಡೆ ಪರಿಶೀಲನೆ ನಡೆಸಲಾಗುತ್ತಿದೆ.