ಪ್ರಜಾಸ್ತ್ರ ಸುದ್ದಿ
ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ಅರಸಾಪುರ ಗೇಟ್ ಹತ್ತಿರ ನಡೆದಿದೆ. ಪವನ್(20), ಬಾಲಾಜಿ(18) ಹಾಗೂ ಅನಿತಾ(40) ಮೃತರು ಎಂದು ಗುರುತಿಸಲಾಗಿದೆ.
ಭೀಕರ ಅಪಘಾತದಲ್ಲಿ ತಾಯಿ, ಮಗ, ಅಣ್ಣನ ಮಗ ಮೃತಪಟ್ಟ ದುರ್ದೈವಿಗಳು. ಇವರೆಲ್ಲ ಮಧುಗಿರಿ ಮೂಲದ ವೀರನಹಳ್ಳಿ ತಾಂಡಾ ನಿವಾಸಿಗಳಾಗಿದ್ದಾರೆ. ಘಟನೆ ಬಳಿಕ ಚಾಲಕ ಪರಾರಿಯಾಗಿದ್ದಾನೆ. ಕೊರಟಗೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.