ಪ್ರಜಾಸ್ತ್ರ ಸುದ್ದಿ
ಚಾಮರಾಜನಗರ: ಲಾರಿ ಚಾಲಕ ಏಕಾಏಕಿ ಗಾಡಿಯನ್ನು ಬಲಕ್ಕೆ ತೆಗೆದುಕೊಂಡ ಕಾರಣ ಕಾರೊಂದು ಬಂದು ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಹತ್ತಿರ ನಡೆದಿದೆ.
ಮೈಸೂರಿಗೆ ಪ್ರವಾಸಕ್ಕೆ ಹೊರಟಿದ್ದ ಕೇರಳ ಮೂಲದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಸುಜಿತ್ ಕೃಷ್ಣನ್ ಅನ್ನೋ ವ್ಯಕ್ತಿ ಮೃತಪಟ್ಟಿದ್ದಾನೆ. ಜೋವನ್, ಜೀತು, ವಿಜೇಶ್ ಹಾಗೂ ಸೋಲೆಮಾನ್ ಅನ್ನೋ ನಾಲ್ವರು ಗಾಯಗೊಂಡಿದ್ದು, ಅವರನ್ನು ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.